ಬೆಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ 5 ಕೋಟಿ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕುಂದಾಪುರಗೆ ಸೇರಿದ ಕೋಟ್ಯಂತರ ರೂ. ಮೌಲ್ಯದ ಸೊತ್ತುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. N
ಇದೇ ವೇಳೆ ಮತ್ತೊಬ್ಬ ಆರೋಪಿ ಉಡುಪಿ ಜಿಲ್ಲೆಯ ಪ್ರಸಾದ್ ಬೈಂದೂರುನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸರ್ಚ್ ವಾರೆಂಟ್ ಪಡೆದು ಶೋಧನೆ ನಡೆಸಿದ ಸಿಸಿಬಿ ಪೊಲೀಸರು ಉಡುಪಿಯ ಉಳ್ಳೂರು ಶ್ರೀರಾಮ ಸೊಸೈಟಿಯ ಬ್ಯಾಂಕ್ ಲಾಕರ್ನಲ್ಲಿ ಇಟ್ಟಿದ್ದ ಆಸ್ತಿ ಪತ್ರ ಬಂಗಾರವನ್ನು ಪತ್ತೆ ಮಾಡಿದ್ದಾರೆ. 1.8 ಕೋಟಿ ರೂ. ಮೌಲ್ಯದ ಆಸ್ತಿ ಪತ್ರ, 40 ಲಕ್ಷ ನಗದು, 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಪತ್ತೆಯಾಗಿದೆ.
ಚೈತ್ರಾ ಸ್ನೇಹಿತ ಶ್ರೀಕಾಂತ್ ಹೆಸರಿನಲ್ಲಿ ಬ್ಯಾಂಕ್ನಲ್ಲಿ ಹಣ, ಚಿನ್ನ ಇಟ್ಟಿದ್ದಳು. ಅಲ್ಲದೆ ಶ್ರೀಕಾಂತ್ ಹೆಸರಲ್ಲಿ ಉಡುಪಿಯ ಹಿರಿಯಡ್ಕದಲ್ಲಿ ಎರಡು ಹಂತಸ್ತಿನ ಮನೆ ಕಟ್ಟಿಸುತ್ತಿದ್ದಳು. ಪ್ರಸಾದ್ ಬೈಂದೂರನ್ನು ಎರಡು ದಿನದ ಹಿಂದೆ ವಿಚಾರಣೆ ನಡೆಸಿ ಕಳುಹಿಸಿದ್ದ ಸಿಸಿಬಿ ಪೊಲೀಸರು, ಆತನನ್ನು ಮತ್ತೆ ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
ಮತ್ತೊಂದೆಡೆ ಚೈತ್ರಾ ಕುಂದಾಪುರ ಮತ್ತು ಪ್ರಸಾದ್ ಬೈಂದೂರು ಹಣದ ಡೀಲ್ ಬಗ್ಗೆ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು, ಅದರಲ್ಲಿ ಮಾಜಿ ಸಚಿವರೊಬ್ಬರ ಹೆಸರು ಪ್ರಸ್ಥಾಪವಾಗಿದೆ.
ಮೂರು ಕಡೆ ಸ್ಥಳ ಮಹಜರು: ಬೆಂಗಳೂರಿನ ಮಂಗಮ್ಮನಪಾಳ್ಯದಲ್ಲಿರುವ ಉದ್ಯಮಿ ಗೋವಿಂದ ಬಾಬು ಪೂಜಾರಿ ಕಚೇರಿ, ಗೋವಿಂದರಾಜನಗರದಲ್ಲಿರುವ ಸ್ವಾಮೀ ನಿವಾಸ, ಕೆ.ಕೆ.ಗೆಸ್ಟ್ ಹೌಸ್ನ ಎರಡನೇ ಮಹಡಿಯಲ್ಲಿರುವ 207 ಸಂಖ್ಯೆ ರೂಮ್ ಅನ್ನು ಸಿಸಿಬಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ.
ಗೋವಿಂದ ಬಾಬು ಪೂಜಾರಿ ಕಚೇರಿಯಲ್ಲಿ ಟಿಕೆಟ್ ಕೊಡಿಸುವ ಸಂಬಂಧ ಮೀಟಿಂಗ್ ನಡೆದಿದ್ದು, ಅಲ್ಲದೇ ಆರೋಪಿ ಗಗನ್ ಅಲ್ಲಿಂದಲೇ ಹಣ ತೆಗೆದುಕೊಂಡು ಹೋಗಿದ್ದ ಹೀಗಾಗಿ ಅಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಗೋವಿಂದರಾಜನಗರ ನಿವಾಸದಲ್ಲಿ ಸ್ವಾಮೀಜಿ ಒಂದೂವರೆ ಕೋಟಿ ರೂ. ಪಡೆದಿದ್ದರು ಎನ್ನಲಾಗಿದೆ. ಜತೆಗೆ ಕೆ.ಕೆ.ಗೆಸ್ಟ್ ಹೌಸ್ ನಲ್ಲಿ ಹಲವು ಬಾರಿ ಮೀಟಿಂಗ್ ನಡೆದಿತ್ತು.
ಇನ್ನು, ಮತ್ತೊಬ್ಬ ಆರೋಪಿ ಚೆನ್ನಾನಾಯಕ್ ಚುನಾವಣಾ ಸಮಿತಿ ಸದಸ್ಯ ಎಂದು ಭೇಟಿಯಾಗಿದ್ದು, ಇಲ್ಲಿಯೇ, ಹೀಗಾಗಿ ಮೂರು ಕಡೆಗಳಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಸ್ವಾಮೀಜಿ ನಿವಾಸ ಮತ್ತು ಮಠ ಸೇರಿ ಹಲವು ಕಡೆ ಮಹಜರು ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಉಡುಪಿಯಲ್ಲಿ ಎರಡು ಅಂತಸ್ತಿನ ಮನೆ: ಚೈತ್ರಾ ಕುಂದಾಪುರ ಹಿರಿಯಡ್ಕದಲ್ಲಿ 20 ಸೆಂಟ್ಸ್ ಜಾಗ ಖರೀದಿಸಿ ಮನೆ ಕಟ್ಟಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಗೆಳೆಯ ಶ್ರೀಕಾಂತ್ ನಾಯಕ್ ಹೆಸರಿನಲ್ಲಿ ಸೆಂಟ್ಸ್ಗೆ 50 ಸಾವಿರ ರೂ. ನೀಡಿ ಜಾಗ ಖರೀದಿಸಲಾಗಿದ್ದು, ಎರಡು ಅಂತಸ್ತಿನ ಮನೆ ನಿರ್ಮಾಣ ಮಾಡುತ್ತಿರುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದನೇ ಅಂತಸ್ತಿನ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.
ಆಸ್ಪತ್ರೆಯಿಂದ ಡಿಸ್ಟಾರ್ಜ್: ಚೈತ್ರಾ ಕುಂದಾಪುರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆರೋಗ್ಯ ಸುಸ್ಥಿತಿಯಲ್ಲಿದೆ. ಎಂಆರ್ಐ ಮತ್ತು ಇಸಿಜಿ ವರದಿ ನಾರ್ಮಲ್ ಆಗಿದ್ದು, ಆಸ್ಪತ್ರೆಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಡಿಸ್ಟಾರ್ಜ್ ಮಾಡಲಾಗುವುದು ಎಂದು ಬಿಎಂಆರ್ಸಿಎಲ್ನ ಡೀನ್ ಮತ್ತು ನಿರ್ದೇಶಕ ಡಾ.ರಮೇಶ್ ಕೃಷ್ಣ ತಿಳಿಸಿದ್ದಾರೆ. ಸಿಸಿಬಿ ಪೊಲೀಸರ ವಶದಲ್ಲಿದ್ದ ಚೈತ್ರಾ ಕುಂದಾಪುರ ಶುಕ್ರವಾರ ಬೆಳಗ್ಗೆ ಕುಸಿದು ಬಿದ್ದಿದ್ದು, ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆದಾಖಲಿಸಲಾಗಿತ್ತು.
ಉದ್ಯಮಿ ವಿರುದ್ಧವೇ ದೂರು: ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ವಂಚನೆಗೆ ಒಳಗಾದ ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಸ್ವಾಮೀಜಿ ದೂರು ನೀಡಿದ್ದಾರೆ. ಗೋವಿಂದಬಾಬು, ಸಾಮಾಜಿಕ ಕಾರ್ಯಕರ್ತ ಸೀನಪ್ಪ ಶೆಟ್ಟಿ, ಕಾಂಗ್ರೆಸ್ ಸೇವಾ ದಳದ ಜಂಟಿ ಸಂಚಾಲಕ ಹರ್ಷ ಮೆಂಡನ್, ಉಡುಪಿ ಜಿಲ್ಲೆ ಬೈಂದೂರಿನ ದಿನೇಶ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಗೆ ಆ.11ರಂದು ದೂರು ನೀಡಿದ್ದರು. ಸ್ವಾಮೀಜಿ ದೂರಿನ ಬಗ್ಗೆ ಪೊಲೀಸರು ಎನ್ ಸಿಆರ್ ದಾಖಲಿಸಿದ್ದಾರೆ. ಈ ಮಧ್ಯೆ ಸ್ವಾಮೀಜಿ ಕಾರು ಚಾಲಕನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದು, ಸ್ವಾಮೀಜಿ ಸುಳಿವು ಪತ್ತೆಯಾಗುವ ಸಾಧ್ಯತೆಯಿದೆ.
ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ:
ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ:
ಪ್ರಕರಣದ ಎ3 ಆರೋಪಿ ಸ್ವಾಮೀಜಿ ಬಂಧನ ಭೀತಿಯಿಂದ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗೆ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಸೆ.19ಕ್ಕೆ ಮುಂದೂಡಲಾಗಿದೆ. ಸ್ವಾಮೀಜಿ ಪರ ವಕೀಲ ಅರುಣ್ ಶ್ಯಾಮ್ ವಂಚನೆ ಪ್ರಕರಣದಲ್ಲಿ ಸ್ವಾಮೀಜಿ ವಿರುದ್ಧ ಯಾವುದೇ ಆರೋಪವಿಲ್ಲ. ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಮನವಿ ಮಾಡಿದ್ದರು. ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ಕೋರ್ಟ್ ಸೂಚನೆ ನೀಡಿದೆ. ಸ್ವಾಮೀಜಿಗೆ ಜಾಮೀನು ನೀಡದಂತೆ ಗೋವಿಂದಬಾಬು ಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.
ವಿಶೇಷ ತಂಡದಿಂದ ತನಿಖೆ: ಚೈತ್ರಾ ಕುಂದಾಪುರ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಇಂದಿರಾ ಕ್ಯಾಂಟಿನ್ ಬಾಕಿ ಬಿಲ್ ಬಗ್ಗೆ ಸಿಸಿಬಿ ವಿಶೇಷ ತಂಡ ತನಿಖೆ ಕೈಗೊಂಡಿದೆ. ಸಿಸಿಬಿ ಕಚೇರಿಗೆ ವಿಚಾರಣೆಗೆ ಆಗಮಿಸಿದ ಸಂದರ್ಭದಲ್ಲಿ ಇಂದಿರಾ ಕ್ಯಾಂಟಿನ್ ಬಾಕಿ ಬಿಲ್ ಬಗ್ಗೆ ಚೈತ್ರಾ ಆರೋಪ ಮಾಡಿದ್ದರು. ಬಾಕಿ ಬಿಲ್ ಆರೋಪಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಶೇಷ ತಂಡ ರಚಿಸಿದ್ದು, ಮಾಹಿತಿ ಕಲೆ ಹಾಕಲು ಮುಂದಾದ ತಂಡ ಪಾಲಿಕೆಯ ಹಿರಿಯ ಅಧಿಕಾರಿಗಳ ಬಳಿ ಮಾಹಿತಿ ಸಂಗ್ರಹಿಸಿದೆ. ಜತೆಗೆ ಇಂದಿರಾ ಕ್ಯಾಂಟಿನ್ ಬಿಲ್ ಬಿಡುಗಡೆ ಮಾಡುವ ಅಧಿಕಾರಿಗಳ ಕಾಲ್ ಡೀಟೈಲ್ಸ್ ಕೂಡ ಕಲೆ ಹಾಕಿದ್ದಾರೆ.
ಗೋವಿಂದಬಾಬು ಪೂಜಾರಿಗೆ ಸೇರಿದ ಕ್ಯಾಂಟಿನ್ ವ್ಯವಹಾರಗಳ ಬಗ್ಗೆ ಪೂರ್ಣ ಮಾಹಿತಿ ನೀಡುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಗೋವಿಂದಬಾಬು ಎಷ್ಟು ವರ್ಷಗಳಿಂದ ಕ್ಯಾಂಟಿನ್ಗಳಿಗೆ ಊಟ ಸರಬರಾಜು ಮಾಡುತ್ತಿದ್ದಾರೆ.
ಇದುವರೆಗೂ ಇವರಿಗೆ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ? ಕಳೆದ ಎರಡು ವರ್ಷಗಳಿಂದ ಎಷ್ಟು ಹಣ ಬಾಕಿ ನೀಡಬೇಕಿತ್ತು.ಮೂರು ತಿಂಗಳಲ್ಲಿ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ? ಎಂಬುದು ಸೇರಿ ಕ್ಯಾಂಟಿನ್ಗೆ ಸಂಬಂಧಿಸಿದಂತೆ ಹಲವಾರು ವಿಷಯಗಳ ಬಗ್ಗೆ ಸಿಸಿಬಿ ಅಧಿಕಾರಿಗಳು ಬಿಬಿಎಂಪಿ ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದಿದ್ದಾರೆ.
ನ್ಯೂಸ್ ರೂಂ: