ಡಾ.ಶಿವಕುಮಾರ್ ಸ್ವಾಮಿಗಳ ಬದುಕಿನ ಚಿಂತನೆ-ಆದರ್ಶಗಳ ಪಾಲನೆಯಿಂದ ಸದೃಡ ಸಮಾಜ ನಿರ್ಮಾಣ-ದೀರಜ್ ಮುನಿರಾಜು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರ ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮೀಜಿ ಅವರ ಚಿಂತನೆಗಳು ಮತ್ತು ಬದುಕಿನ ಆದರ್ಶಗಳನ್ನು ಪಾಲಿಸುವುದರಿಂದ ಸದೃಢ ಸಮಾಜ ನಿರ್ಮಾಣದ ಕನಸು ಸಾಕಾರಗೊಳ್ಳುತ್ತದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ಅವರು, ಇಲ್ಲಿನ ತಾಲೂಕು ಕಚೇರಿ ವೃತ್ತದಲ್ಲಿ ಭಾನುವಾರ ಡಾ.ಶಿವಕುಮಾರ ಸ್ವಾಮೀಜಿ ಅವರ 5ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಅನ್ನದಾಸೋಹ, ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಅಂತರಂಗ ಶುದ್ಧಿಗೆ ಒತ್ತು ನೀಡಿದಾಗ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣ ಸಾಧ್ಯವಾಗುತ್ತದೆ. ಆತ್ಮಸಾಕ್ಷಿಗೆ ಪೂರಕರವಾಗಿ ನಡೆಯುವುದು ಪ್ರತಿಯೊಬ್ಬ ಮನುಷ್ಯನ ಕರ್ತವ್ಯವಾಗಬೇಕು ಎಂಬುದನ್ನು ಡಾ. ಶಿವಕುಮಾರ ಸ್ವಾಮೀಜಿ ಅವರು ತಮ್ಮ ಬದುಕಿನ ಮೂಲಕ ತಿಳಿಸಿದ್ದಾರೆ ಎಂದರು.
ಆಧ್ಯಾತ್ಮಿಕ ಚಿಂತನೆಗಳು ದೇಶದ ಸಾಂಸ್ಕೃತಿಕ ಮೌಲ್ಯಗಳನ್ನು ಹೆಚ್ಚಿಸಿವೆ. ಸಮಾಜದ ಹಿತ ಹಾಗೂ ಇತರರ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಗುಣಧರ್ಮ ಅಗತ್ಯ. ಕರ್ನಾಟಕದ ಶರಣ ಪರಂಪರೆ ಸಾಮಾಜಿಕ ಜಾಗೃತಿಯ ಜೊತೆಗೆ ಸಮನ್ವಯ ಹಾಗೂ ಸಹಬಾಳ್ವೆಯ ಪಾಠವನ್ನೂ ಕಲಿಸಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ನಿಶ್ಚಲ ನಿರಂಜನಾನಂದ ಸ್ವಾಮೀಜಿ, ವೀರಶೈವ ಸಂಘದ ಅಧ್ಯಕ್ಷ ಸೋಮರುದ್ರಶರ್ಮ,ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಎಸ್.ಪ್ರಕಾಶ್, ಜಿಪಂ ಮಾಜಿ ಸದಸ್ಯ ಎ.ನರಸಿಂಹಯ್ಯ, ನಗರಸಭೆ ಸದಸ್ಯ ಬಂತಿ ವೆಂಕಟೇಶ್, ಸಮುದಾಯದ ಮುಖಂಡರಾದ ಪುಷ್ಪಾ ಶಿವಶಂಕರ್, ಲತಾ ಆರಾಧ್ಯ, ಬಸವರಾಜು, ಕೆ.ಮಹಾಲಿಂಗಯ್ಯ, ಸತೀಶ್, ಸುಜಯ್, ಮುತ್ತಣ್ಣ, ಗಗನ್, ಲೋಕೇಶ್, ಮಹದೇವ್, ಮಲ್ಲಿಕಾರ್ಜುನ್ ಮತ್ತಿತರರು ಪಾಲ್ಗೊಂಡಿದ್ದರು.