ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಮಹಿಳಾ ವಿಚಾರ ಗೋಷ್ಠಿ ಕಾರ್ಯಕ್ರಮ
ದೊಡ್ಡಬಳ್ಳಾಪುರ:ದೊಡ್ಡಬಳ್ಳಾಪುರ ತಾಲ್ಲೂಕು,ಮಧುರೆ ಹೋಬಳಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರ ವತಿಯಿಂದ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು
ಮಹಿಳಾ ವಿಚಾರ ಗೋಷ್ಠಿ ಉದ್ಘಾಟನೆ ಮಾಡಿದ ಡಾಕ್ಟರ್ ಆಂಜನಪ್ಪ ,ಶ್ರೀಮತಿ ವರಲಕ್ಷ್ಮಿ ಪಿಎಸ್ಐ ದೊಡ್ಡಬೆಳವಂಗಲ ಉಮಾರಬ್ಬ ನಿರ್ದೇಶಕರು ಬೆಂಗಳೂರು ಗ್ರಾಮಾಂತರ ಜಿಲ್ಲೆ
ನಂತರ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಕುರಿತು ಮಾತನಾಡಿದ ಡಾಕ್ಟರ್ ಆಂಜನಪ್ಪ ಇತ್ತಿಚಿನ ದಿನಗಳಲ್ಲಿ ಥೈರಾಯ್ಡ್ ಹಾರ್ಮೋನ್ ಸಮಸ್ಯೆ ಹೆಚ್ಚಾಗುತ್ತಿದ್ದು ಹದಿಹರೆಯದ ವಯಸ್ಸಿನಲ್ಲಿ ಥೈರಾಯ್ಡ್ ಗ್ರಂಥಿ ಸಮಸ್ಯೆ ಬರುತ್ತಿದ್ದು ಸೂಕ್ತ ಚಿಕಿತ್ಸೆ ಪಡೆಯುವಂತೆ ತಿಳಿಸಿದರು
ಕಿಡ್ನಿ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಿದರು
ಚಿಕ್ಕ ವಯಸ್ಸಿನಲ್ಲೇ ಹೃದಯಾಘಾತ ವಾಗುವುದು ಹೆಚ್ಚಾಗುತ್ತಿದೆ ಇದಕ್ಕೆಲ್ಲ ನಮ್ಮ ಆಹಾರ ಪದ್ಧತಿ ಹಾಗೂ ಜೀವನ ಶೈಲಿ ಕಾರಣ ಎಂದು ತಿಳಿಸಿದರು
ಮಹಿಳೆಯರಲ್ಲಿ ಅತೀ ಹೆಚ್ಚು ಕಂಡುಬರುತ್ತಿರುವ ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಮಾಹಿತಿ ನೀಡುತ್ತಾ ಇತ್ತಿಚಿನ ದಿನಗಳಲ್ಲಿ ಅಹಾರ ಪದ್ಧತಿ ಯಿಂದ ಗರ್ಭಕೋಶದ ಸಮಸ್ಯೆ ಬರುತ್ತಿದ್ದು ಇದರಿಂದ ಮರಣದ ಸಂಖ್ಯೆ ಹೆಚ್ಚುತ್ತಿದೆ ಇದರ ಬಗ್ಗೆ ಗಮನ ಹರಿಸಿ ಸೂಕ್ತ ಚಿಕಿತ್ಸೆ ಪಡೆಯುವಂತೆ ಸೂಚಿಸಿದರು
ಜಿಲ್ಲಾ ನಿರ್ದೇಶಕರಾದ ಉಮಾರಬ್ಬ ಮಾತನಾಡಿ
ಮಹಿಳೆಯರಿಗೆ ಆತ್ಮವಿಶ್ವಾಸವೇ ಮೂಡಿಸಲು ಜ್ಞಾನ ವಿಕಾಸದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ
ಮಹಿಳೆಯರಿಗೆ, ಕಾನೂನು, ಆರೋಗ್ಯದ ಬಗ್ಗೆ ಪ್ರತಿ ತಿಂಗಳು ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಲಾಗುತ್ತಿದೆ
ಈ ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಸುಧಾ ಭಾಸ್ಕರ್ ಒಕ್ಕೂಟದ ಅಧ್ಯಕ್ಷೆ ವಸಂತಾ
ಸಮನ್ವಾಯಾದಧಿಕಾರಿ ಶ್ರೀಮತಿ ಛಾಯಾ ಕುಮಾರಿ, ಕೃಷಿ ಮೇಲ್ವಿಚಾರಕರಾದ ಲೋಹಿತ್ ಗೌಡ ವಲಯ ಮೇಲ್ವಿಚಾರಕರಾದ ಗಿರಿಜ, ರೇಣುಕಾ ಪ್ರಸಾದ್ ಹಾಗೂ ಸಂಘದ ಸೇವಾ ಪ್ರತಿನಿಧಿಗಳು , VLE ಸೇವಾದಾರರು,ಸಂಘದ ಸದಸ್ಯರು ಹಾಜರಿದ್ದರು